Quantcast
Channel: ರಾಜ್ಯ - vijaykarnataka indiatimes
Viewing all articles
Browse latest Browse all 7056

ಸಿಎಂ ಇಂದು ದಿಲ್ಲಿಗೆ, ಈ ಬಾರಿ ಸಂಪುಟ ಪುನಾರಚನೆ ಚರ್ಚೆಯಿಲ್ಲ

$
0
0

ಬೆಂಗಳೂರು : ರಾಜ್ಯಸಭೆ ಹಾಗೂ ವಿಧಾನ ಪರಿಷತ್‌ ಚುನಾವಣೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ವರಿಷ್ಠರೊಂದಿಗೆ ಚರ್ಚಿಸಲು ಗುರುವಾರ ದಿಲ್ಲಿಗೆ ತೆರಳಲಾಗುತ್ತಿದೆ. ಈ ಭೇಟಿಯಲ್ಲಿ ಸಂಪುಟ ಪುನಾರಚನೆ ಪ್ರಸ್ತಾಪ ಇರುವುದಿಲ್ಲ ಎಂಬ ಸುಳಿವು ನೀಡಿರುವ ಸಿಎಂ ಸಿದ್ದರಾಮಯ್ಯ ಮಂತ್ರಿ ಸ್ಥಾನದ ಆಕಾಂಕ್ಷಿಗಳಿಗೆ ನಿರಾಸೆ ಮೂಡಿಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಭಾಗಿಯಾದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಬುಧವಾರ ಪ್ರತಿಕ್ರಿಯಿಸಿದ ಅವರು, ರಾಜ್ಯಸಭೆ ಹಾಗೂ ವಿಧಾನ ಪರಿಷತ್‌ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಬೇಕಿದೆ. ಈ ಬಗ್ಗೆ ಹೈಕಮಾಂಡ್‌ನೊಂದಿಗೆ ಸಮಾಲೋಚಿಸಲಾಗುವುದು ಎಂದರು. ಸಂಪುಟ ಪುನಾರಚನೆ ಬಗ್ಗೆ ಕೇಳಿದಾಗ, ಸದ್ಯಕ್ಕೆ ಈ ಪ್ರಕ್ರಿಯೆಯಿಲ್ಲ ಎನ್ನುವಂತೆ ತಲೆ ಆಡಿಸುವ ಮೂಲಕ ಮಂತ್ರಿ ಮಂಡಲದಲ್ಲಿ ಬದಲಾವಣೆ ತರಲು ಕಾಲ ಪಕ್ವವಾಗಿಲ್ಲ ಎಂಬುದನ್ನು ಸೂಚ್ಯವಾಗಿ ಹೇಳಿದರು.

ಸಿಎಂ ಅವರೊಂದಿಗೆ ಗೃಹ ಸಚಿವರೂ ಆಗಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಅವರೂ ದಿಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ. ರಾಜ್ಯಸಭೆ, ಪರಿಷತ್‌ ಚುನಾವಣೆ ಅಭ್ಯರ್ಥಿಗಳ ಬಗ್ಗೆ ಚರ್ಚಿಸಲಾಗುವುದು. ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು, ವರಿಷ್ಠರ ಸಮ್ಮುಖ ತೀರ್ಮಾನವಾಗಲಿದೆ. ಸಂಪುಟ ಪುನಾರಚನೆ ಸಿಎಂ ವಿವೇಚನೆಗೆ ಬಿಟ್ಟಿದ್ದಾಗಿದೆ ಎಂದು ಈ ಭೇಟಿಯ ಉದ್ದೇಶದ ಬಗ್ಗೆ ಕೆಪಿಸಿಸಿ ಅಧ್ಯಕ್ಷರೂ ಹೇಳಿಕೆ ನೀಡಿದ್ದಾರೆ.

ಸಿಡಬ್ಲ್ಯುಸಿಯಲ್ಲಿ ಚರ್ಚೆ

ಮೇ 28 ಕ್ಕೆ ದಿಲ್ಲಿಯಲ್ಲಿ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆ ನಿಗದಿಯಾಗಿದೆ. ಸಮಿತಿ ಸದಸ್ಯರಾದ ಎಸ್‌.ಎಂ. ಕೃಷ್ಣ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಪಂಚ ರಾಜ್ಯಗಳ ಚುನಾವಣೆ ಸೋಲಿನ ಪರಾಮರ್ಶೆ, ಒಟ್ಟಾರೆ ದೇಶಾದ್ಯಂತ ಪಕ್ಷದ ಸಂಘಟನೆಗೆ ಬಲ ತುಂಬುವ ನಿಟ್ಟಿನಲ್ಲಿ ಚರ್ಚೆಯಾಗಲಿದೆ. ಹಾಗೆಯೇ ಕರ್ನಾಟಕದಲ್ಲಿ ಪಕ್ಷದ ವಿದ್ಯಮಾನದ ಬಗ್ಗೆಯೂ ಸಭೆಯಲ್ಲಿ ಪ್ರಮುಖವಾಗಿ ಪ್ರಸ್ತಾಪವಾಗಬಹುದು ಎಂದು ತಿಳಿದು ಬಂದಿದೆ.

ಸಂಪುಟ ಪುನಾರಚನೆ ಸಾಧ್ಯತೆಯನ್ನು ಸಿಎಂ ಅವರು ಸೂಚ್ಯವಾಗಿ ತಳ್ಳಿ ಹಾಕಿದ್ದರೂ ಈ ಬಾರಿಯ ಭೇಟಿಯಲ್ಲಿ ಪ್ರಾಸಂಗಿಕವಾಗಿ ಪ್ರಸ್ತಾಪವಾಗಬಹುದು. ಬಳಿಕ ಈ ಕುರಿತ ಚರ್ಚೆಗೆ ಮತ್ತೊಂದು ದಿನ ನಿಗದಿ ಮಾಡಬಹುದು ಎಂದು ಹೇಳಲಾಗುತ್ತಿದೆ.


Viewing all articles
Browse latest Browse all 7056

Trending Articles


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ


ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ


ಕಾರ್ಪೋರೇಟರ್ ಅವ್ವ ಮಾದೇಶ  ಜೀವಾವಧಿ ಶಿಕ್ಷೆಗೆ ಕಾರಣವಾದ ` ಜೋಡಿ ಕೊಲೆ’ಯ  ಇನ್ ಸೈಡ್ ಸ್ಟೋರಿ…


ಸೆಕ್ಸ್, ಸೆಕ್ಸ್.. ಎಂದು ಹಾತೊರೆಯುತ್ತಿದ್ದ ಬಾಯ್ ಫ್ರೆಂಡ್ ನ ಕತ್ತುಹಿಸುಕಿ ಕೊಂದ್ಳು..!


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


ಅದೊಂದು ಸಣ್ಣ ಮುಂಜಾಗ್ರತೆ ವಹಿಸಿದ ಕಾರಣಕ್ಕೆ 'ಹೆಂಡತಿಯ ಗುಲಾಮ'ನಾದ ಗಂಡ..!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಮದುವೆ ನಂತರ ಬ್ಲೂ ಫಿಲಂ ನೋಡಿದರೆ ಏನಾಗುತ್ತೆ?


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ವಚನಗಳಿಂದ ಸಂಗೀತ ಲೋಕ ಶ್ರೀಮಂತ



<script src="https://jsc.adskeeper.com/r/s/rssing.com.1596347.js" async> </script>