Quantcast
Channel: ರಾಜ್ಯ - vijaykarnataka indiatimes
Viewing all articles
Browse latest Browse all 7056

ಜಾಟ್‌ ಕೋಟಾ ಪ್ರಚೋದನಕಾರಿ ಸಂದೇಶ: ಎಫ್‌ಐಆರ್ ದಾಖಲು

$
0
0

ಚಂಡೀಗಢ: ಜಾಟ್ ಮೀಸಲಾತಿ ಪ್ರತಿಭಟನೆಗೆ ಸಂಬಂಧಿಸಿದಂತೆ ವಾಟ್ಸಾಪ್‌ನಲ್ಲಿ ಪ್ರಚೋದನಕಾರಿ ಸಂದೇಶ ವಿನಿಮಯ ಮಾಡಿದವರ ವಿರುದ್ಧ ಹರಿಯಾಣಾ ಪೊಲೀಸರು ದೇಶದ್ರೋಹ ಕಾನೂನಿನಡಿ ಪ್ರಕರಣ ದಾಖಲಿಸುವ ಮೂಲಕ ಕಠಿಣ ಕ್ರಮ ಕೈಗೊಂಡಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚೋದನಕಾರಿ ಹೇಳಿಕೆಗಳು ಪ್ರಸಾರವಾಗುವುದನ್ನು ತಡೆಯುವ ಮೂಲಕ ಉದ್ವಿಗ್ನತೆ ನಿವಾರಣೆ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೆಲವು ಕಿಡಿಗೇಡಿಗಳು ಮೀಸಲಾತಿಗೆ ಆಗ್ರಹಿಸುವ ಪ್ರತಿಭಟನೆಗೆ ಸಂಬಂಧಿಸಿದಂತೆ ತಪ್ಪಾಗಿ ವದಂತಿಗಳನ್ನು ಹರಿಯಬಿಡುತ್ತಾರೆ. ಇದು ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುತ್ತದೆ. ಹೀಗಾಗಿ ಹಿಸ್ಸಾರ್‌ನಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯಿದೆ ಮತ್ತು ದೇಶದ್ರೋಹ ಕಾನೂನಿನಡಿ ಪ್ರಕರಣ ದಾಖಲಿಸಿರುವುದಾಗಿ ನಗರ ಠಾಣೆಯ ಮುಖ್ಯಾಧಿಕಾರಿ ಮನ್‌ದೀಪ್‌ ಸಿಂಗ್‌ ಹೇಳಿದ್ದಾರೆ.
ಜಾಟ್‌ ಮೀಸಲಾತಿ ಪ್ರತಿಭಟನೆ ಆರಂಭಗೊಳ್ಳಲಿದ್ದು, ಆಹಾರ ಸಾಮಗ್ರಿ ಸಂಗ್ರಹಿಸಿಟ್ಟುಕೊಳ್ಳುವಂತೆ ಹೇಳುವ ಸಂದೇಶವನ್ನು ವ್ಯಕ್ತಿಯೊಬ್ಬ ವಾಟ್ಸಾಪ್‌ನಲ್ಲಿ ಕಳಿಸಿದ್ದಾನೆ. ಈ ಸಂದೇಶ ಉತ್ತರ ರಾಜ್ಯಗಳಲ್ಲಿ ಬಹಳಷ್ಟು ಕೋಲಾಹಲ್ಕಕೆ ಕಾರಣವಾಗಲಿದೆ. ಈ ನಿಟ್ಟಿನಲ್ಲಿ ಸಂದೇಶದ ಮೂಲಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಿರುವುದಾಗಿ ಅವರು ಹೇಳಿದರು.


Viewing all articles
Browse latest Browse all 7056

Trending Articles


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್


ತುಳು ತೆರೆಗೆ ಸೋನಿಯಾ ಎಂಟ್ರಿ


ಮತ್ತೊಂದು ಬೆಚ್ಚಿಬೀಳಿಸುವ ಘಟನೆ: ಕಬ್ಬಿನಗದ್ದೆಯಲ್ಲಿ ಅತ್ಯಾಚಾರದ ಬಳಿಕ ಪೈಶಾಚಿಕ ಕೃತ್ಯ


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!



<script src="https://jsc.adskeeper.com/r/s/rssing.com.1596347.js" async> </script>