Quantcast
Channel: ರಾಜ್ಯ - vijaykarnataka indiatimes
Viewing all articles
Browse latest Browse all 7056

ಗಡಿಯಲ್ಲಿ ಪಾಕ್‌ ಸೇನಾ ಬಲ ಹೆಚ್ಚಳ

$
0
0

ಗಡಿ ಗ್ರಾಮಗಳ ಜನರ ಸ್ಥಳಾಂತರ | ಗುಪ್ತಚರ ಇಲಾಖೆ ಮಾಹಿತಿ

ಹೊಸದಿಲ್ಲಿ: ಪಾಕ್‌ ಆಕ್ರಮಿತ ಕಾಶ್ಮಿರದ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನಾ ಜಮಾವಣೆ ಅಧಿಕಗೊಳಿಸಿದೆ. ಅಲ್ಲಿನ ಗಡಿ ಭಾಗದ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.

ಸೀಮಿತ ದಾಳಿ ಬಳಿಕ ಭಾರತ ಸಹ ಮುಂಜಾಗ್ರತಾ ಕ್ರಮವಾಗಿ ಪಾಕ್‌ ಗಡಿಗೆ ಹೊಂದಿಕೊಂಡಿರುವ ಗ್ರಾಮಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿತ್ತು. ಜತೆಗೆ ಗಡಿಯಲ್ಲಿ ಹೆಚ್ಚುವರಿ ಸೇನೆಯನ್ನು ಜಮಾವಣೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಸೇನೆ ಕೂಡ ಇದೇ ಹಾದಿ ತುಳಿದಿದೆ. ಭಾರತ ಉಗ್ರರ ವಿರುದ್ಧ ಮತ್ತೊಂದು ಸೀಮಿತ ದಾಳಿ ನಡೆಸಬಹುದು ಎಂದು ಮುಂಜಾಗ್ರತಾ ಕ್ರಮವಾಗಿ ಪಾಕಿಸ್ತಾನ ಗಡಿಯಲ್ಲಿ ಹೆಚ್ಚುವರಿ ಸೇನೆಯನ್ನು ನಿಯೋಜಿಸುತ್ತಿರಬಹುದು ಎಂದು ಗುಪ್ತಚರ ಇಲಾಖೆಯ ಮೂಲಗಳು ತಿಳಿಸಿವೆ.

ಸೀಮಿತ ದಾಳಿಗೆ ಪಾಕಿಸ್ತಾನ ಪ್ರತಿಕಾರ ತಿರಿಸಿಕೊಳ್ಳಲು ಪಾಕ್‌ ಯೋಜನೆ ರೂಪಿಸುತ್ತಿದೆ. ಆದರೆ, ಸೇನೆಯನ್ನು ಬಳಸಿ ಭಾರತದ ಮೇಲೆ ಯುದ್ಧ ಮಾಡುವುದಕ್ಕಿಂತಲೂ ಉಗ್ರರ ಮೂಲಕ ಭಾರತದ ಮೇಲೆ ದಾಳಿ ಮಾಡುವ ತಂತ್ರವನ್ನು ಪಾಕ್‌ ಅನುಸರಿಸುವ ಸಾಧ್ಯತೆಯಿದೆ. ಹಾಗಾಗಿ ಗಡಿ ನಿಯಂತ್ರಣ ರೇಖೆ ಬಳಿ ಹೆಚ್ಚುವರಿ ಸೇನೆಯನ್ನು ನಿಯೋಜಿಸಿ ಹೆಚ್ಚಿನ ಉಗ್ರರಿಗೆ ಗಡಿ ದಾಟಿ ಭಾರತದೊಳಗೆ ನುಸುಳಲು ನೆರವು ನೀಡಲು ಮುಂದಾಗಬಹುದು. ಮುಂದಿನ ದಿನಗಳಲ್ಲಿ ಒಳನುಸುಳುವಿಕೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಕಂಡು ಬರುತ್ತಿದೆ. ಜತೆಯಲ್ಲೆ ಪಾಕಿಸ್ತಾನ ಗಡಿ ಭಾಗದಲ್ಲಿದ್ದ ಉಗ್ರರ ತರಬೇತಿ ಶಿಬಿರಗಳನ್ನು ತಮ್ಮ ಸೇನಾ ನೆಲೆಗಳ ಸನಿಹಕ್ಕೆ ಸ್ಥಳಾಂತರಿಸುತ್ತಿದೆ. ಆ ಮೂಲಕ ಮತ್ತೊಂದು ಸೀಮಿತ ದಾಳಿಯನ್ನು ತಡೆಯಲು ಪಾಕ್‌ ಸಂಚು ರೂಪಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

100 ಕ್ಕೂ ಹೆಚ್ಚು ಉಗ್ರರು ಪಿಒಕೆಯಲ್ಲಿ ಭಾರತದ ವಿರುದ್ಧ ದಾಳಿ ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ. ಅವರು ಒಳನುಸುಳಲು ಸೂಕ್ತ ಅವಕಾಶಕ್ಕಾಗಿ ಕಾಯುತ್ತಿದ್ದಾರೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೊವಲ್‌ ಮೊನ್ನೆಯಷ್ಟೇ ಪ್ರಧಾನಿ ನರೇಂದ್ರ ಮೊದಿಗೆ ಅವರಿಗೆ ಮಾಹಿತಿ ನೀಡಿದ್ದಾರೆ.

ರಾಜನಾಥ್‌ ಪರಿಶೀಲನೆ:

ಈ ನಡುವೆ, ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರು ಶನಿವಾರ ರಾಜಸ್ಥಾನದ ಬರ್ಮೇರ್‌ ಜಿಲ್ಲೆಗೆ ಭೇಟಿ ನೀಡಿ ಭದ್ರತಾ ವ್ಯವಸ್ಥೆ ಪರಿಶೀಲಿಸಿದರು.


Viewing all articles
Browse latest Browse all 7056

Trending Articles


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ


ಮದುವೆಯಾಗಲು ನಿರ್ಧರಿಸಿದ್ದಾರೆ ಅಮ್ಮ- ಮಗ


LGBT ಗಳ ಲೈಂಗಿಕ ಆಸಕ್ತಿಯು ನೈಸರ್ಗಿಕವಾಗಿ ಬಂದಿರುವುದಲ್ಲವೇ….!


ಸೆಕ್ಸ್, ಸೆಕ್ಸ್.. ಎಂದು ಹಾತೊರೆಯುತ್ತಿದ್ದ ಬಾಯ್ ಫ್ರೆಂಡ್ ನ ಕತ್ತುಹಿಸುಕಿ ಕೊಂದ್ಳು..!


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


ಅದೊಂದು ಸಣ್ಣ ಮುಂಜಾಗ್ರತೆ ವಹಿಸಿದ ಕಾರಣಕ್ಕೆ 'ಹೆಂಡತಿಯ ಗುಲಾಮ'ನಾದ ಗಂಡ..!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಿರಲು ಮಂಗಳಮುಖಿಯಿಂದ ಒಂದು ನಾಣ್ಯ ಪಡೆದು ಹೀಗೆ ಮಾಡಿ


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!



<script src="https://jsc.adskeeper.com/r/s/rssing.com.1596347.js" async> </script>